ಪ್ರಜಾಸ್ತ್ರ ಸುದ್ದಿ
ನವದೆಹಲಿ: ಉತ್ತರಕಾಂಡದ ಹಲ್ದವಾನಿಯ ಬಂಧೂಲಪುರ ರೈಲ್ವೆ ಇಲಾಖೆಯ ಪ್ರದೇಶದಲ್ಲಿನ ಸುಮಾರು 4 ಸಾವಿರ ಕುಟುಂಬಗಳನ್ನು ಅಲ್ಲಿಂದ ತೆರವುಗೊಳಿಸುವ ಕಾರ್ಯಾಚರಣೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಕುರಿತು ಉತ್ತರಕಾಂಡ ಸರ್ಕಾರ ಹಾಗೂ ಭಾರತೀಯ ರೈಲ್ವೆ ಇಲಾಖೆಗೆ ನೋಟಿಸ್ ನೀಡಿದೆ.
ಒಂದು ರಾತ್ರಿಯಲ್ಲಿ 50 ಸಾವಿರ ಜನರನ್ನು ಅಲ್ಲಿಂದ ಖಾಲಿ ಮಾಡಿಸಲು ಆಗುವುದಿಲ್ಲವೆಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ. ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ, ನ್ಯಾಯಮೂರ್ತಿ ಎಸ್.ಎ ನಜೀರ್ ಹಾಗೂ ಪಿ.ಎಸ್ ನರಸಿಂಹ ಅವರಿದ್ದ ಪೀಠ ವಿಚಾರಣೆ ನಡೆಸಿತು. ಇಲ್ಲಿಯ ಜನವರ ಪರವಾಗಿ ವಕೀಲ ಪ್ರಶಾಂತ್ ಭೂಷಣ್ ವಾದ ಮಂಡಿಸಿದರು.
ಸಾವಿರ ಸಂಖ್ಯೆಯಲ್ಲಿ ಮಕ್ಕಳು, ಹಿರಿಯರು ಇದ್ದಾರೆ. ಅವರನ್ನು ಏಕಾಏಕಿ ಹೋಗಿ ಎಂದರೆ ಹೇಗೆ ಅನ್ನೋ ಪ್ರಶ್ನೆ ಎದ್ದಿದೆ. ಅವರಿಗೆ ಪರಿಹಾರ ನೀಡಬೇಕು ಎಂದು ಸಾಮೂಹಿಕವಾಗಿ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.