ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿದ್ದ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಮೂಲಕ ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ಗ್ರೀನ್ ಸಿಗ್ನಲ್ ಸಿಕ್ಕಿದೆ.
ಹಾಸನ ಕ್ಷೇತ್ರದಿಂದ 2018ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆಗ ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ಮಂಜು ಪರಾಭವಗೊಂಡಿದ್ದರು. ಚುನಾವಣೆಯಲ್ಲಿ ಅಕ್ರಮವೆಸಗಿದ್ದಾರೆ ಎಂದು ಎ.ಮಂಜು ದೂರು ದಾಖಲಿಸಿದ್ದರು. ಹೀಗಾಗಿ ಸೆಪ್ಟೆಂಬರ್ 1, 2013ರಂದು ಕರ್ನಾಟಕ ಹೈಕೋರ್ಟ್ ಸಂಸದ ಸ್ಥಾನ ಅನರ್ಹಗೊಳಿಸಿತ್ತು.
ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲು ಹತ್ತಿದ್ದರು. ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ. ಹೀಗಾಗಿ ಇಂದಿನಿಂದ ಶುರುವಾಗಿರುವ ವಿಶೇಷ ಅಧಿವೇಶನದಲ್ಲಿ ಭಾಗಹಿಸಬಹುದಾಗಿದೆ.