ಬಿಬಿಸಿ ಸಾಕ್ಷ್ಯಚಿತ್ರ ನಿರ್ಬಂಧದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು

247

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 2002ರಲ್ಲಿ ನಡೆದ ಗೋದ್ರಾ ಹತ್ಯಾಕಾಂಡದ ಕುರಿತು ಬಿಬಿಸಿ ‘ಇಂಡಿಯಾ: ದಿ ಮೋದಿ ಕೊಷನ್’ ಸಾಕ್ಷ್ಯಚಿತ್ರ ನಿರ್ಮಿಸಿದೆ. ಇದರ ಪ್ರದರ್ಶನ ನಡೆಸದಂತೆ ಹಾಗೂ ಯುಟ್ಯೂಬ್ ಸೇರಿ ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿದೆ.

ಲಾಯರ್ ಎಂ.ಎಲ್ ಶರ್ಮಾ ಎಂಬುವರು ಅರ್ಜಿ ಸಲ್ಲಿಸಿದ್ದು, ಬಿಬಿಸಿ ಸಾಕ್ಷ್ಯಚಿತ್ರದ ಭಾಗ-1 ಹಾಗೂ 2ರ ಪರೀಕ್ಷೆಯಾಗಲಿ 2002ರ ಘಟನೆಯಲ್ಲಿ ಯಾರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಕಾರಣವಾಗಿದ್ದಾರೋ ಅವರ ವಿರುದ್ಧ ಕ್ರಮವಾಗಲಿ ಎಂದಿದ್ದಾರೆ. ಅಲ್ಲದೆ, ಈ ರೀತಿಯ ನಿರ್ಬಂಧ ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಂಡಂತೆಯಾಗುತ್ತೆ ಎಂದಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 6ರಂದು ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.




Leave a Reply

Your email address will not be published. Required fields are marked *

error: Content is protected !!