ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕಲ್ಲು ಕ್ವಾರಿಗೆ ಸ್ಕೂಲ್ ಬಸ್ ವೊಂದು ಉರುಳಿಬಿದ್ದ ಘಟನೆ ಆನೇಕಲ್ ತಾಲೂಕಿನ ಕೂಡ್ಲು ಬಳಿ ನಡೆದಿದೆ. ಅದೃಷ್ಟವಶಾತ್ ಬಸ್ ನಲ್ಲಿ ಮಕ್ಕಳು ಇರಲಿಲ್ಲ. ಚಾಕಲನೂ ಅನಾಹುತದಿಂದ ಪಾರಾಗಿದ್ದಾನೆ ಎನ್ನಲಾಗುತ್ತಿದೆ.
ಬೆಂಗಳೂರಿನ ಎಚ್.ಎಸ್.ಎಲ್ ಲೇಔಟ್ ಇಂಟರ್ ನ್ಯಾಷನಲ್ ಸ್ಕೂಲ್ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರಲು ಹೋಗುತ್ತಿದ್ದ ವೇಳೆ, ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಲ್ಲು ಕ್ವಾರಿಗೆ ಉರುಳಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.