ಪ್ರಜಾಸ್ತ್ರ ಸುದ್ದಿ
ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ವೊಂದು ಹಳ್ಳಕ್ಕೆ ಉರುಳಿಬಿದ್ದ ಘಟನೆ ಹುಲಿಕಲ್ ಗ್ರಾಮದಲ್ಲಿ ನಡೆದಿದೆ. ಮಾನಸ ಗಂಗೋತ್ರಿ ಶಾಲೆಗೆ ಸೇರಿದ ಬಸ್ ಅಪಘಾತವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಅನಾಹುತವಾಗಿಲ್ಲ.
ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಹುಲಿಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.