ಪ್ರಜಾಸ್ತ್ರ ಸುದ್ದಿ
ಚಿತ್ರದುರ್ಗ: ಶಾಲಾ ವಾಹನವೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಮದ್ದಿಹಳ್ಳಿ ಕರಿಯಜ್ಜನಪಾಳ್ಯದಲ್ಲಿ ನಡೆದಿದೆ.
ದೀಪಕ್(06), ಪ್ರಕೃತಿ(08) ಹಾಗೂ ತನು(12) ಗಾಯಗೊಂಡ ವಿದ್ಯಾರ್ಥಿಗಳು. ಇವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಖಂಡೇನಹಳ್ಳಿಯಿಂದ ಶಿರಾ ತಾಲೂಕಿನ ಲಕ್ಕನಹಳ್ಳಿಯಲ್ಲಿನ ಖಾಸಗಿ ಶಾಲೆಗೆ 60 ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವಾಗ ಅಪಘಾತ ನಡೆದಿದೆ.