ಶಾಲಾ-ಕಾಲೇಜು ಬಂದ್ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?

255

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕರೋನಾ ರೂಪಾಂತರ ಓಮಿಕ್ರಾನ್ ಸೋಂಕಿನ ಆತಂಕ ಹೆಚ್ಚಾಗಿದೆ. ಅದರಲ್ಲೂ ಶಾಲಾ, ಕಾಲೇಜುಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗುತ್ತೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

ಶಾಲಾ, ಕಾಲೇಜುಗಳಿಗೆ ಯಾವುದೇ ಹೊಸದಾಗಿ ಮಾರ್ಗಸೂಚಿಗಳಿಲ್ಲ. ಈ ಹಿಂದೆ ಇರುವುದನ್ನೇ ಮುಂದುವರೆಸಲಾಗುತ್ತಿದೆ. 2 ಡೋಸ್ ಲಸಿಕೆ ಪಡೆಯದಿದ್ದರೆ ಶಾಲೆಗೆ ಪ್ರವೇಶವಿಲ್ಲವೆಂದು ಹೇಳಲು ಆಗದು. ಸಧ್ಯಕ್ಕೆ ಶಾಲಾ, ಕಾಲೇಜುಗಳನ್ನು ಬಂದ್ ಮಾಡುವ ಪರಿಸ್ಥಿತಿ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಇದುವರೆಗೂ 172 ಶಿಕ್ಷಕರು ಹಾಗೂ ಮಕ್ಕಳಿಗೆ ಕರೋನಾ ಸೋಂಕು ದೃಢಪಟ್ಟಿದೆ. ಅದರಲ್ಲಿ 100 ಜನರು ಗುಣಮುಖರಾಗಿದ್ದಾರೆ. ಇನ್ನು ಹಾಸ್ಟೇಲ್ ನಲ್ಲಿರುವ ವಿದ್ಯಾರ್ಥಿಗಳ ಬಗ್ಗೆ ಸಾಕಷ್ಟು ಗಮನ ಹರಿಸಲಾಗುತ್ತಿದೆ ಎಂದು ಹೇಳಿದರು.




Leave a Reply

Your email address will not be published. Required fields are marked *

error: Content is protected !!