ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಲಾಕ್ ಡೌನ್ ನಿಂದಾಗಿ ಶಾಲಾ ಕಾಲೇಜುಗಳು ಬಂದ್ ಆಗಿದ್ದು ಇನ್ನೂ ಶುರುವಾಗಿಲ್ಲ. ಅನ್ ಲಾಕ್ 5.0 ಪ್ರಕ್ರಿಯೆ ಶುರುವಾಗಿದೆ. ಹೀಗಿದ್ರೂ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗಿಲ್ಲ. ಈ ಬಗ್ಗೆ ಸಿಎಂ ಬಿಎಸ್ವೈ ಮಹತ್ವದ ಮಾಹಿತಿ ನೀಡಿದ್ದಾರೆ.
ಕೇಂದ್ರದ ಮಾರ್ಗಸೂಚಿ ಪ್ರಕಾರ ಹಂತ ಹಂತವಾಗಿ ಶಾಲಾ-ಕಾಲೇಜು ಶುರು ಮಾಡಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಪರಿಸ್ಥಿತಿ ನೋಡಿಕೊಂಡು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತೆ. ಹೀಗಾಗಿ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಲಾಗ್ತಿದೆ ಎಂದು ಹೇಳಿದ್ರು.
ಇನ್ನು ಶಾಲಾ ಕಾಲೇಜು ಪ್ರಾರಂಭದ ಬಗ್ಗೆ ಪೋಷಕರ ಅಭಿಪ್ರಾಯ ಸಹ ಮುಖ್ಯವಾಗಿದೆ. ಇದರ ಜೊತೆಗೆ ಶೈಕ್ಷಣಿಕ ತಜ್ಞರ ವರದಿ ಬರಬೇಕಿದೆ. ಇದೆಲ್ಲ ನೋಡಿಕೊಂಡು ಮುಂದಿನ ನಿರ್ಧಾರ ಎಂದು ತಿಳಿಸಿದ್ದಾರೆ.