ಪ್ರಜಾಸ್ತ್ರ ಸುದ್ದಿ
ನವದೆಹಲಿ: ಇಂದು ದೇಶದ ತುಂಬಾ ಸಹೋದರ-ಸಹೋದರಿಯ ಪ್ರತೀಕವಾದ ರಕ್ಷಾ ಬಂಧನವನ್ನು ಆಚರಿಸಲಾಗುತ್ತಿದೆ. ಸಹೋದರಿಯರು ತಮ್ಮ ಅಣ್ಣ, ತಮ್ಮನಿಗೆ ರಾಖಿ ಕಟ್ಟುವ ಮೂಲಕ ಶುಭ ಹರಿಸುತ್ತಿದ್ದಾರೆ. ಇದೇ ರೀತಿ ಪ್ರಧಾನಿ ಮೋದಿ ಶಾಲಾ ಮಕ್ಕಳೊಂದಿಗೆ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದ್ದಾರೆ.
ನವದೆಹಲಿಯಲ್ಲಿರುವ ಶಾಲೆಯಲ್ಲಿನ ಮಕ್ಕಳು ಪ್ರಧಾನಿ ಮೋದಿಗೆ ರಾಖಿ ಕಟ್ಟಿ ಸಂಭ್ರಮಿಸಿದರು. ನಂತರ ಮಕ್ಕಳೊಂದಿಗೆ ಕೆಲ ಹೊತ್ತು ಸಂಭ್ರಮಿಸಿ ಫೋಟೋಗೆ ಪೋಸ್ ನೀಡಿದರು.
ಇನ್ನು ಕಣಿವೆ ನಾಡಾದ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿನ ಶಾಲಾ ವಿದ್ಯಾರ್ಥಿನಿಯರು ಸಿಆರ್ ಪಿಎಫ್ ಯೋಧರಿಗೆ ರಾಖಿ ಕಟ್ಟಿದ್ದಾರೆ. ಸಾಂಬಾ ಜಿಲ್ಲೆಯಲ್ಲಿ ಬಿಎಸ್ಎಫ್ ಯೋಧರಿಗೂ ಸಹ ಶಾಲಾ ಮಕ್ಕಳು ರಾಖಿ ಕಟ್ಟಿದರು.