ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸೆಪ್ಟೆಂಬರ್ 21ರಿಂದ ಶಾಲೆಗಳು ಪ್ರಾರಂಭವಾಗುತ್ತವೆ ಅನ್ನೋ ವಿಚಾರಕ್ಕೆ ಸಂಬಂಧಿಸಿದಂತೆ, ಶಿಕ್ಷಣ ಸಚಿವ ಸುರೇಶಕುಮಾರ ಇಂದು ಮಾತ್ನಾಡಿದ್ದಾರೆ. ಸೆಪ್ಟೆಂಬರ್ 21ರಿಂದ ಶಾಲೆಗಳು ಶುರುವಾಗುತ್ತವೆ. ಆದ್ರೆ, ಕ್ಲಾಸ್ ಶುರುವಾಗಲ್ಲ. ಇದಕ್ಕೆ ಕೇಂದ್ರದಿಂದ ಮಾರ್ಗಸೂಚಿ ಬಂದಿಲ್ಲ ಎಂದಿದ್ದಾರೆ.
ಸೆಪ್ಟೆಂಬರ್ 21ರಿಂದ 9ರಿಂದ 12ನೇ ತರಗತಿ ವಿದ್ಯಾರ್ಥಿಗಳು ತಮ್ಮ ಓದಿನ ಬಗ್ಗೆ ಏನಾದ್ರೂ ಅನುಮಾನ ಇದ್ದರೆ ಕೇಳಬಹುದು. ಆದ್ರೆ, ಅದು ಪ್ರತಿನಿತ್ಯ ಆಗಿರುವುದಿಲ್ಲ. ಓದಿದ್ದು ಅರ್ಥವಾಗಲಿಲ್ಲವೆಂದರೆ ಶಿಕ್ಷಕರಿಂದ ಮಾಹಿತಿ ಪಡೆಯಬಹುದು ಎಂದಿದ್ದಾರೆ. ಇನ್ನು ಸೆಪ್ಟೆಂಬರ್ 21ರಿಂದ ಶಿಕ್ಷಕರು ಶಾಲೆಯಲ್ಲಿ ಹಾಜರಾಗಬೇಕು ಎಂದಿದ್ದಾರೆ.
ಇದರ ಜೊತೆಗೆ ಖಾಸಗಿ ಶಾಲೆಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದು, ಸರ್ಕಾರದ ಆದೇಶದಂತೆ ಅರ್ಧ ಟರ್ಮ್ ಫೀಸ್ ಮಾತ್ರ ತೆಗೆದುಕೊಳ್ಳಬೇಕು ಎಂದಿದ್ದಾರೆ. ಈ ಸೂಚನೆ ಉಲ್ಲಂಘಿಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರಗಿಸುವುದಾಗಿ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.