ವಿದ್ಯಾರ್ಥಿನಿಯರಿಗೆ ತಿರ್ಲಾಪೂರ ಶಾಲೆಯ ಮುಖ್ಯೋಪಾಧ್ಯಾಯ ಕಿರುಕುಳ

246

ಪ್ರಜಾಸ್ತ್ರ ಸುದ್ದಿ

ನವಲಗುಂದ: ತಾಲೂಕಿನ ತಿರ್ಲಾಪೂರ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯ ಸಿದ್ದಲಿಂಗಪ್ಪ ಅಂಗಡಿ, ವಿದ್ಯಾರ್ಥಿನಿಯರಿಗೆ, ಶಿಕ್ಷಕರಿಗೆ ಕಿರುಕುಳ ನೀಡುತ್ತಿದ್ದಾನೆಂದು ಪ್ರತಿಭಟನೆ ನಡೆಸಿದರು.

ಸ್ಥಳೀಯ ರಾಜಕೀಯ ಮುಖಂಡರನ್ನು ಬಳಸಿಕೊಂಡು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ. ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳನ್ನು ತನ್ನ ಅಂಗಡಿಯಲ್ಲೇ ಖರೀದಿಸಬೇಕೆಂದು ಒತ್ತಡ ಹಾಕುತ್ತಿದ್ದಾನೆಂದು ಹೇಳಿ, ಶಾಲೆ ಹಾಗೂ ಗ್ರಾಮ ಪಂಚಾಯ್ತಿ ಎದುರು ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದರು.

ಮುಖ್ಯೋಪಾಧ್ಯಾಯ ಸಿದ್ದಲಿಂಗಪ್ಪ ಅಂಗಡಿ ಕಳ್ಳಾಟವನ್ನು ಪ್ರಶ್ನಿಸಿದರೆ ರಾಜಕೀಯ ಮುಖಂಡರನ್ನಿಟ್ಟುಕೊಂಡು ಹೆದರಿಸುತ್ತಿದ್ದಾನಂತೆ. ಕೂಡಲೇ ಈತನನ್ನು ಅಮಾನತು ಮಾಡಬೇಕೆಂದು ವಿದ್ಯಾರ್ಥಿಗಳು, ಸ್ಥಳೀಯರು, ಶಿಕ್ಷರು ಆಗ್ರಹಿಸಿದ್ದಾರೆ. ಒಂದು ವೇಳೆ ಈತನ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕ್ರಮ ತೆಗೆದುಕೊಳ್ಳದೆ ಹೋದರೆ ಇಲಾಖೆಯ ಮೇಲಾಧಿಕಾರಿಗಳ ಕೈವಾಡವಿದೆ ಅನ್ನೋ ಅನುಮಾನ ಬರುತ್ತೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಒಳ್ಳೆಯ ಗುರು ಆಗಬೇಕಾದವನು ಅವರ ಪಾಲಿಗೆ ರಾಕ್ಷಸನಾಗಿರುವುದು ನಿಜಕ್ಕೂ ದುರಂತ.




Leave a Reply

Your email address will not be published. Required fields are marked *

error: Content is protected !!