ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪಿಂಚಣಿಗಾಗಿ ರಾಜ್ಯದಲ್ಲಿ ಶಾಲಾ ಶಿಕ್ಷಕರ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಯುತ್ತಿದೆ. ಇದರಲ್ಲಿ ಭಾಗವಹಿಸಿದ್ದ ಅನುದಾನಿತ ಶಾಲಾ ಶಿಕ್ಷಕರೊಬ್ಬರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ರಾಯಚೂರು ಜಿಲ್ಲೆ ಸಿಂಧನೂರು ಪಟ್ಟಣದ ಶಂಕರಪ್ಪ ಬೋರೆಡ್ಡಿ(47) ಮೃತ ಶಿಕ್ಷಕನೆಂದು ಹೇಳಲಾಗುತ್ತಿದೆ. ಮಂಗಳವಾರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ. ಸಂಜೆ ಶಿಕ್ಷಕರ ಸದನದಲ್ಲಿನ ರೂಮಿಗೆ ಬಂದಿದ್ದಾನೆ. ತಡರಾತ್ರಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಹತ್ತಿರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.