ಪಠ್ಯಪುಸ್ತಕ ಪಕ್ಷಪುಸ್ತಕ ಮಾಡುವ ಹುನ್ನಾರ

288

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿನ ಭಗತ್ ಸಿಂಗ್ ಅವರ ಕುರಿತಾದ ಪಾಠವನ್ನು ತೆಗೆದು ಆರ್ ಎಸ್ಎಸ್ ಸಂಸ್ಥಾಪಕ ಹೆಡಗೇವಾರ್ ಕುರಿತು ಸೇರಿಸಿರುವ ವಿಚಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್ ಶಾಸಕಾಂಗದ ನಾಯಕ ಹೆಚ್.ಡಿ ಕುಮಾರಸ್ವಾಮಿ, ಪಠ್ಯಪುಸ್ತಕವನ್ನು ಪಕ್ಷಪುಸ್ತಕ ಮಾಡುವ ಹುನ್ನಾರ ಎಂದು ಟ್ವೀಟ್ ಮಾಡಿದ್ದಾರೆ.

ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಪರೇಷನ್ ಕಮಲದ ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದ ಸ್ವಘೋಷಿತ ಡೋಂಗಿ ರಾಷ್ಟ್ರ ಭಕ್ತರು ಇನ್ನೇನು ಮಾಡಲು ಸಾಧ್ಯ ಎಂದು ಟೀಕಿಸಿದ್ದಾರೆ.


TAG


Leave a Reply

Your email address will not be published. Required fields are marked *

error: Content is protected !!