ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಶಾಲಾ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆಯ ಕುರಿತಂತೆ ರಾಜ್ಯದಲ್ಲಿ ಚರ್ಚೆ ಶುರುವಗಿದೆ. ಗುಜರಾತಿನಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದರ ಚರ್ಚೆ ರಾಜ್ಯದಲ್ಲಿ ನಡೆದಿದ್ದು, ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಈ ಬಗ್ಗೆ ಇಂದು ವಿಧಾನಸಭೆಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಸಧ್ಯ ಸರ್ಕಾರದ ಮುಂದೆ ಈ ರೀತಿಯ ಯಾವ ಉದ್ದೇಶವಿಲ್ಲ. ಮುಂದಿನ ಬಾರಿಯ ಶೈಕ್ಷಣಿಕ ವರ್ಷದಲ್ಲಿ ನೋಡೋಣ ಎಂದಿದ್ದಾರೆ. ಈ ಮೂಲಕ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ತರುವ ಸೂಚನೆ ನೀಡಿದ್ದಾರೆ.