ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸಲ್ಲಿಸಿ ಪ್ರಸ್ತುತ ರೈಲ್ವೆ ಇಲಾಖೆಯ ಪೊಲೀಸ್ ಎಡಿಜಿಪಿಯಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದಾರಂತೆ.
1990ನೇ ಕರ್ನಾಟಕ ಕೇಡರ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ನಿವೃತ್ತಿಗೆ ಇನ್ನೂ ಮೂರು ವರ್ಷ ಇದೆ. ಆದ್ರೆ, ಅದಕ್ಕೂ ಮೊದ್ಲು ಸ್ವಯಂ ನಿವೃತ್ತಿ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಡಿಜಿ ಐಜಿಪಿಗೆ ಪತ್ರ ಬರೆದಿದ್ದಾರೆ. ಸ್ವಯಂ ನಿವೃತ್ತಿಗೆ ವೈಯಕ್ತಿಕ ಕಾರಣ ನೀಡಿದ್ದು, ಸರ್ಕಾರ ಏನು ಮಾಡುತ್ತೆ ಅನ್ನೋ ಕುತೂಹಲ ಮೂಡಿದೆ.