ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ವಿಜಯಪುರ: ಹಿರಿಯ ಸಾಹಿತಿ ಈಶ್ವರಚಂದ್ರ ಚಿಂತಾಮಣಿ(96) ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನ ಅಗಲಿದ್ದಾರೆ.
ಶ್ರೇಷ್ಠ ಶಿಕ್ಷಕ ರಾಷ್ಟ್ರ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳನ್ನ ಪಡೆದಿರುವ ಇವರು, ರಚಿಸಿದ ಕಥೆಗಳು, ನಾಟಕಗಳು ಪಠ್ಯವಾಗಿವೆ. ಎಲ್ಲ ಆಕಾಶವಾಣಿ ಕೇಂದ್ರಗಳಲ್ಲಿ ಪ್ರಸಾರಗೊಂಡಿವೆ. ಇವರು ತಮ್ಮ ದೇಹ ದಾನವನ್ನ ಬಿಎಲ್ ಡಿಇ ಸಂಸ್ಥೆಯ ವೈದ್ಯಕೀಯ ಸಂಶೋಧನಾ ಕಾಲೇಜಿಗೆ ನೀಡುವ ವಾಗ್ದಾನ ಮಾಡಿದ್ದು, ಅದರಂತೆ ಬೆಳಗ್ಗೆ 11ಕ್ಕೆ ಮೃತದೇಹ ಹಸ್ತಾಂತರ ಮಾಡಲಾಗುತ್ತಿದೆ ಎಂದು ಪುತ್ರ ಡಾ.ಮಹೇಶ ಚಿಂತಾಮಣಿ ಹೇಳಿದ್ದಾರೆ.