ಹಿರಿಯ ಸಾಹಿತಿ ವಸಂತ ಕುಷ್ಟಗಿ ನಿಧನ

245

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಹಿರಿಯ ಸಾಹಿತಿ, ಚಿಂತಕ ಪ್ರೊ.ವಸಂತ ಕುಷ್ಟಿಗಿ ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. 85 ವರ್ಷದ ಇವರು ಕಳೆದೊಂದು ವಾರದಿಂದ ಲೋ ಬಿಪಿಯಿಂದ ಬಳಲುತ್ತಿದ್ದರು. ಹೀಗಾಗಿ ನಗರದ ಹಾರ್ಟ್ ಫೌಂಡೇಷನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ. 60ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿರುವ ಇವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಸನ್ಮಾನ ಗೌರವಗಳು ಸಂದಿವೆ. ಇವರ ನಿಧನಕ್ಕೆ ಸಿಎಂ ಯಡಿಯೂರಪ್ಪ ಸೇರಿದಂತೆ ಸಾಹಿತ್ಯದ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!