ಪ್ರಜಾಸ್ತ್ರ ಸುದ್ದಿ
ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದೇವರಹೊಸಹಳ್ಳಿ ಹತ್ತಿರ ಭೀಕರ ಅಪಘಾತವಾಗಿ ಈ ದುರಂತ ನಡೆದಿದೆ.
ತುಂತುರು ಮಳೆ, ಮಂಜು ಮುಸುಕಿದ ಪರಿಣಾಮ ನಿಯಂತ್ರಣ ತಪ್ಪ ಕಾರುಗಳ ಸರಣಿ ಅಪಘಾತವಾಗಿದೆ. ಮಂಜುಳಾ, ರೇಣುಕಮ್ಮ, ಸುಧೀರ್ ಮೃತ ದುರ್ದೈವಿಗಳು. ಇನ್ನು ಮೂವರು ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.