ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಗ್ನಲ್ ನಲ್ಲಿ ನಿಂತಿದ್ದ ಕಾರಿಗೆ ಟಿಪ್ಪರ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ 7 ಐಷಾರಾಮಿ ಕಾರುಗಳು ಜಖಂಗೊಂಡ ಘಟನೆ ದೇವನಹಳ್ಳಿ ಹತ್ತಿರ ನಡೆದಿದೆ. ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಿಎಂಡಬ್ಲು, ಥಾರ್, ಇಟಿಯೋಸ್ ಸೇರಿ 7 ಐಷಾರಾಮಿ ಕಾರುಗಳಿಗೆ ಹಾನಿಯಾಗಿದೆ. ಈ ಘಟನೆಯಿಂದಾಗಿ ಕಿಲೋ ಮೀಟರ್ ಗಟ್ಟಲೇ ಟ್ರಾಫಿಕ್ ಸಮಸ್ಯೆ ಕಾಣಿಸಿಕೊಂಡಿದೆ. ಪೊಲೀಸರು ಟಿಪ್ಪರ್ ವಶಕ್ಕೆ ಪಡೆದು ಚಾಲಕನ ಪತ್ತೆ ಕಾರ್ಯ ನಡೆಸಿದ್ದಾರೆ.