ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಮೂವರ ಸ್ಥಿತಿ ಗಂಭೀರವಾಗಿದೆ. 8ನೇ ಮೈಲಿ ಜಂಕ್ಷನ್ ಹತ್ತಿರ ಬೈಕ್ ಹಾಗೂ ಮೂರು ಕಾರುಗಳ ನಡುವೆ ಅಪಘಾತ ನಡೆದಿದೆ.
ಪ್ರಕ್ಯಾತ್ ಚಿನ್ನಪ್ಪ(22) ಮೃತ ದುರ್ದೈವಿ. ನಟರಾಜ್, ರಕ್ಷಿತ್, ಬಸವಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ಪೀಣ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದೆ.