ಪ್ರಜಾಸ್ತ್ರ ಸಾಹಿತ್ಯ ಮತ್ತು ರಂಗಭೂಮಿ
ಸಿಂದಗಿ: ಶಿಕ್ಷಕ ಹಾಗೂ ಮಕ್ಕಳ ಸಾಹಿತಿ ರಾಚು ಕೊಪ್ಪ ಅವರ ‘ಸೀಸದ ಕಡ್ಡಿ’ ಮಕ್ಕಳ ಕವನ ಸಂಕಲನ ಮಾರ್ಚ್ 3, 2024 ಮಂಗಳವಾರ ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಬಿಡುಗಡೆಯಾಗುತ್ತಿದೆ.
ಗ್ರಾಮದ ಶ್ರೀ ಗುರು ಕೇದಾರಲಿಂಗೇಶ್ವರ ಪ್ರೌಢಶಾಲೆಯಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ, ಮಾಧುರಿ ಪ್ರಕಾಶನದಿಂದ ಪ್ರಕಟಗೊಂಡಿರುವ ಪುಸ್ತಕವನ್ನು ಹಿರಿಯ ಮಕ್ಕಳ ಸಾಹಿತಿ ಹ.ಮ ಪೂಜಾರ ಬಿಡುಗಡೆ ಮಾಡಲಿದ್ದಾರೆ. ಹಿರಿಯ ಮಕ್ಕಳ ಸಾಹಿತಿ ಪ.ಗು ಸಿದ್ದಾಪೂರ ಕೃತಿ ಪರಿಚಯ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವರಾಜ ಬಿರಾದಾರ, ಎಸ್.ಜಿ.ಕೆ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎಂ.ಎಸ್ ಸಾವಳಸಂಗ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಿಂದಗಿ ತಾಲೂಕು ಘಟಕದ ಅಧ್ಯಕ್ಷ ಆನಂದ ಭೂಸನೂರ, ಅತಿಥಿಗಳಾಗಿ ಪುತ್ರಕರ್ತ ಅವಧೂತ ಬಂಡಗಾರ, ಕೆ.ಜಿಎಂ.ಪಿ.ಎಸ್ ಶಾಲೆಯ ಮುಖ್ಯ ಗುರುಗಳಾದ ಎಸ್.ಎಚ್ ಬಿರಾದಾರ, ಪ್ರಭಾರಿ ಮುಖ್ಯ ಗುರುಗಳಾದ ಡಿ.ಕೆ ಕತ್ನಳ್ಳಿ ಭಾಗವಹಿಸಲಿದ್ದಾರೆ. ಶ್ರೀ ಗುರು ಕೇದಾರಲಿಂಗೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಎಸ್.ಎಸ್ ಪಾಟೀಲ ಅಧ್ಯಕ್ಷತೆ ವಹಿಸಿಕೊಳ್ಳಲಿದ್ದಾರೆ.