ಪ್ರಜಾಸ್ತ್ರ ಸುದ್ದಿ
ಮಂಡ್ಯ: ಮಹಿಳೆಯರಿಗೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ವಿರುದ್ಧ, ಜೆಡಿಎಸ್ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ದಾರೆ.
ಶನಿವಾರ ಮಂಡ್ಯದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು, ರೇವಣ್ಣ ಇಂಗ್ಲೆಂಡ್ ಗೆ ಹೋದಾಗ ಅಲ್ಲಿಯೂ ಹೀಗೆ ಮಾಡಿ ಸಿಕ್ಕಿ ಹಾಕಿಕೊಂಡಿದ್ದರು. ರೇವಣ್ಣ ಒಳ್ಳೆಯ ನಡವಳಿಕೆ ವ್ಯಕ್ತಿಯಲ್ಲ. ಪ್ರಜ್ವಲ್ ಮುಂದೆ ಉಮೇಶ್ ರೆಡ್ಡಿಯೂ ಶೂನ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೇವೇಗೌಡರಿಗೆ ಈ ವಯಸ್ಸಿನಲ್ಲಿ ಇಂತಹ ನೀಚ ಕೃತ್ಯ ನೊಡುವ ದೌರ್ಭಾಗ್ಯ ಬಂದಿದೆ. ಬ್ಲೂ ಫಿಲ್ಮ್ ಮಾಡುವವರ ಬಳಿ ಇಷ್ಟೊಂದು ವಿಡಿಯೋ ಇದಾವೋ ಗೊತ್ತಿಲ್ಲ. ಪ್ರಜ್ವಲ್ ಇಷ್ಟೊಂದೆಲ್ಲ ಮಾಡುವಾಗ ಅಪ್ಪ, ಅಮ್ಮ ಕತ್ತೆ ಕಾಯ್ತಿದ್ರಾ? ನನ್ನನ್ನು ಸೇರಿ ಹಲವರನ್ನು ಮುಗಿಸಿದ್ದು ಇದೇ ಕಂಪನಿ. ನೊಂದವರ ಶಾಪ ತಟ್ಟಿದೆ ಎಂದು ವಾಗ್ದಾಳಿ ನಡೆಸಿದರು.