ಪ್ರಜಾಸ್ತ್ರ ಸುದ್ದಿ
ಮೈಸೂರು: ಇಲ್ಲಿನ ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮದಲ್ಲಿ ನಿರ್ಮಿಸಲಾಗಿರುವ ವಿದ್ಯಾಶಾಲೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ, ಪುನೀತ್ ಕನಸನ್ನು ಅವರ ಕುಟುಂಬಸ್ಥರು ನನಸು ಮಾಡಿದ್ದಾರೆ. ಶಕ್ತಿಧಾಮದಲ್ಲಿ ಶಾಲೆ ತೆರೆಯುವುದು ಅವರ ಕನಸಾಗಿತ್ತು ಎಂದರು.
ಹೆಣ್ಣು ಮಕ್ಕಳ ಅಭಿವೃದ್ಧಿಗೆ ಬಜೆಟ್ ನಲ್ಲಿ 40,900 ಕೋಟಿ ಮೀಸಲು ಇಡಲಾಗಿದೆ. ಶಕ್ತಿಧಾಮಕ್ಕೆ 5 ಕೋಟಿ ರೂಪಾಯಿ ನೀಡಲಾಗುವುದು ಎಂದು ಘೋಷಿಸಿದ್ದಾರೆ. ಈ ವೇಳೆ ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ನಟ ಶಿವರಾಜ್ ಕುಮಾರ್, ಪತ್ನಿ ಗೀತಾ ಶಿವರಾಜ್ ಕುಮಾರ್, ಸಚಿವ ಎಸ್.ಟಿ ಸೋಮಶೇಖರ್ ಸೇರಿ ಅನೇಕರಿದ್ದರು.