ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪಟ್ಟಣದ ಗುರುದೇವ ಆಶ್ರಮದ ಶಾಂತಗಂಗಾಧರ ಮಹಾಸ್ವಾಮಿಗಳ 75ನೇ ಅಮೃತಮಹೋತ್ಸವ ಹಿನ್ನೆಲೆಯಲ್ಲಿ, ಜೂನ್ 12ರಂದು ಸರ್ವಧರ್ಮ ಸಮಾವೇಶ ನಡೆಸಲಾಗುತ್ತಿದೆ. ಎಲ್ಲ ಸಮಾಜದ, ಎಲ್ಲ ಧರ್ಮದ ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಹೇಳಿದರು.
ಮಠದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಜಾತ್ಯಾತೀತ ಮನೋಭಾವದ ಹಿನ್ನೆಲೆಯಲ್ಲಿ ಬಂದಿರುವ ಸ್ವಾಮಿಗಳ, 75ನೇ ಹುಟ್ಟು ಹಬ್ಬವನ್ನು ವಿಭಿನ್ನವಾಗಿ ಆಚರಿಸಲಾಗುತ್ತಿದೆ. 500 ಕುಂಭಮೇಳ, ವಿವಿಧ ಜಾನಪದ ಕಲಾತಂಡಗಳೊಂದಿಗೆ, ಅಂಬೇಡ್ಕರ್ ಸರ್ಕಲ್ ನಿಂದ ಸಂಗಮೇಶ್ವರ ದೇವಸ್ಥಾನದವರೆಗೂ ಮೆರವಣಿಗೆ ಸಾಗಲಿದೆ ಎಂದರು.
ಮಧ್ಯಾಹ್ನ 2 ಗಂಟೆಗೆ ಬಹಿರಂಗ ಸಭೆ ನಡೆಯಲಿದೆ. ಈ ವೇಳೆ ಸ್ವಾಮೀಜಿಗಳಿಗೆ ತುಲಾಭಾರ ನಡೆಯಲಿದೆ. ಈ ಒಂದು ಕಾರ್ಯಕ್ರಮದಲ್ಲಿ 4-5 ಸಾವಿರ ಭಕ್ತಾಧಿಗಳು ಸೇರಲಿದ್ದಾರೆ ಅಂತಾ ಹೇಳಿದರು. ಈ ವೇಳೆ ಡಿಎಸ್ಎಸ್ ಜಿಲ್ಲಾ ಸಂಚಾಲಕ ವೈ.ಸಿ ಮಯೂರ, ತಳವಾರ, ಪರಿವಾರ ಹಿತರಕ್ಷಣಾ ಸಮಿತಿಯ ರಾಜ್ಯಾಧ್ಯಕ್ಷ ಶಿವಾಜಿ ಮೆಟಗಾರ, ಟಿಪ್ಪು ಕ್ರಾಂತಿ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಸ್ತಗೀರ ಮುಲ್ಲಾ ಮಾತನಾಡಿದರು.
ಈ ವೇಳೆ ಶಾಂತಗಂಗಾಧರ ಸ್ವಾಮೀಜಿ, ರಾಜಶೇಖರ ನರಗೋದಿ, ವಿಜಯಕುಮಾರ ಯಾಳವಾರ, ಪರಶುರಾಮ ಉಪ್ಪಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.