ಪ್ರಜಾಸ್ತ್ರ ಸುದ್ದಿ
ಸಿಂದಗಿ: ಊರಿನ ಹಿರಿಯ ಮಠದ ಶಾಂತವೀರ ಪಟ್ಟಾಧ್ಯಕ್ಷರ 42ನೇ ಸ್ಮರಣೋತ್ಸವದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ 5ರಿಂದ ವಿವಿಧ ಕಾರ್ಯಕ್ರಮಗಳು ನಡೆದುಕೊಂಡು ಬರುತ್ತಿವೆ. ಇಂದು ಸಂಜೆ ಮಠದ ಶಿವಾನುಭವ ಮಂಟಪದಲ್ಲಿ ಮಂಗಲ ಕಾರ್ಯ ನಡೆಯಲಿದೆ.
ಇದಕ್ಕೂ ಪೂರ್ವದಲ್ಲಿ ಬೆಳಗ್ಗೆ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಶಾಂತವೀರ ಪಟ್ಟಾಧ್ಯಕ್ಷರ ಬೆಳ್ಳಿಮೂರ್ತಿಯ ಮೆರವಣಿಗೆ ನಡೆಯಿತು. ಅಡ್ಡ ಪಲ್ಲಕ್ಕಿಯ ಮೂಲಕ ಮೂರ್ತಿಯ ಮೆರವಣಿಗೆ ನಡೆಸಲಾಯಿತು. ಈ ವೇಳೆ ವಿವಿಧ ಮಠಗಳ ಮಠಾಧೀಶರು ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು.