ಪ್ಯಾರಾಲಿಂಪಿಕ್ ಕಂಚಿನ ಪದಕ ವಿಜೇತನಗೆ ಹೃದಯ ಸಮಸ್ಯೆ

219

ಪ್ರಜಾಸ್ತ್ರ ಕ್ರೀಡಾ ಸುದ್ದಿ

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ 2020ನೇ ಸಾಲಿನ ಪ್ಯಾರಾಲಿಂಪಿಕ್ ಟೂರ್ನಿಯಲ್ಲಿ ಕಂಚಿನ ಪದಕ ಗೆದ್ದ ಶರದ್ ಕುಮಾರಗೆ ಹೃದಯ ಸಮಸ್ಯೆ ಕಾಣಿಸಿಕೊಂಡಿದೆ. ಕಳೆದ ಎರಡು ದಿನಗಳ ಹಿಂದೆ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೃದಯದಲ್ಲಿ ಊತ ಇರುವುದು ಕಂಡು ಬಂದಿದೆ.

ಈ ಬಗ್ಗೆ ಅಥ್ಲೆಟ್ ಶರದ್ ಕುಮಾರ್ ಟ್ವೀಟ್ ಮಾಡಿದ್ದು ಕಠಿಣ ಸಮಯ ನಮ್ಮನ್ನು ಮತ್ತಷ್ಟು ಗಟ್ಟಿಗೊಳಿಸುತ್ತೆ ಎಂದಿದ್ದಾರೆ. 2020ರ ಪ್ಯಾರಾಲಿಂಪಿಕ್ ನಲ್ಲಿ ಹೈಜಂಪ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. 2014 ಹಾಗೂ 2018ರ ಏಷ್ಯನ್ ಗೇಮ್ಸ್ ಗಳಲ್ಲಿ ಚಿನ್ನದ ಪಕದ ಸಾಧನೆ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!