ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ 4 ವರ್ಷಗಳ ಕಾಲ ಶಿಕ್ಷೆ ಅನುಭವಿಸಿ ಬುಧವಾರ ಶಶಿಕಲಾ ನಟರಾಜನ್ ಬಿಡುಗಡೆಯಾಗಿದ್ದಾರೆ. ತಮಿಳುನಾಡು ಮಾಜಿ ಸಿಎಂ, ದಿವಂಗತ ಜೈಲಲಿತಾ ಆಪ್ತೆ, ಕಳೆದ 4 ವರ್ಷಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿದ್ರು.
ಕೋವಿಡ್ 19 ಸೋಂಕಿನ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ. ಅವರಿದ್ದ ಟ್ರಾಮಾ ಕೇಂದ್ರದೊಳಗೆ ವಕೀಲರೊಂದಿಗೆ ಜೈಲಾಧಿಕಾರಿಗಳು ಹೋಗಿ ಸಹಿ ಮಾಡಿಸಿಕೊಳ್ಳುವ ಮೂಲಕ ಅಧಿಕೃತವಾಗಿ ಬಿಡುಗಡೆ ಮಾಡಿದ್ರು. ಅಕ್ರಮ ಆಸ್ತಿ ಗಳಿಕೆ ಕೇಸಿನಲ್ಲಿ ಜೈಲಿ ಸೇರಿದ್ಮೇಲೆ ಎಐಎಡಿಎಂಕೆ ಪಕ್ಷದಿಂದ ಶಶಿಕಲಾರನ್ನ ಉಚ್ಛಾಟನೆ ಮಾಡಲಾಗಿದೆ.