ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ಹಾಗೂ ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ಈ ಬಗ್ಗೆ ಎಐಸಿಸಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ.
ಆರ್ ಆರ್ ಕ್ಷೇತ್ರಕ್ಕೆ, ಐಎಎಸ್ ಅಧಿಕಾರಿ, ದಿವಂಗತ ಡಿ.ಕೆ ರವಿ ಪತ್ನಿ ಕುಸುಮಾ ಹಾಗೂ ಶಿರಾ ಕ್ಷೇತ್ರಕ್ಕೆ ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರಿಗೆ ಟಿಕೆಟ್ ನೀಡಲಾಗಿದೆ. ಸಾಕಷ್ಟು ಚರ್ಚೆ, ಅಭಿಪ್ರಾಯಗಳೊಂದಿಗೆ ಈ ಇಬ್ಬರನ್ನ ಅಭ್ಯರ್ಥಿಗಳೆಂದು ಆಯ್ಕೆ ಮಾಡಲಾಗಿದೆ.