ಸುಪ್ರೀಂನಲ್ಲಿ ಠಾಕ್ರೆಗೆ ಮತ್ತೆ ಹಿನ್ನಡೆ

463

ಪ್ರಜಾಸ್ತ್ರ ಸುದ್ದಿ

ಮುಂಬೈ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಠಾಕ್ರೆ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದರು. ಶಾಸಕರ ಅನರ್ಹತೆ ಬಗ್ಗೆ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದೆ. ಹೀಗಾಗಿ ಠಾಕ್ರೆಗೆ ಮತ್ತೆ ಹಿನ್ನಡೆಯಾಗಿದೆ.

ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದು ಅದನ್ನು ಕೆಡವಿ ಹೊಸ ಸರ್ಕಾರ ರಚನೆಯಾಗಿದೆ. ಬಂಡಾಯ ಶಾಸಕರನ್ನು ಸರ್ಕಾರ ರಚನೆ ಮಾಡಲು ಆಹ್ವಾನಿಸುರುವುದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. ಇದರ ತುರ್ತು ವಿಚಾರಣೆ ನಡೆಸಲು ನಿರಾಕರಿಸಿದೆ.

ಈ ಪ್ರಕರಣದ ವಿಚಾರಣೆ ನಡೆಸಲಾಗುವುದು. ಸ್ವಲ್ಪ ಸಮಯಾವಕಾಶಬೇಕು. 16 ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಸ್ಪೀಕರಿಗೆ ಸೂಚಿಸುವಂತೆ ಸಾಲಿಸಟರ್ ಜನರಲ್ ಗೆ ತಿಳಿಸಿದೆ. ಹೀಗಾಗಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.




Leave a Reply

Your email address will not be published. Required fields are marked *

error: Content is protected !!