ಪ್ರಜಾಸ್ತ್ರ ಸುದ್ದಿ
ತುಮಕೂರು: ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿಯನ್ನು ಅದ್ಧೂರಿಯಾಗಿ ನಡೆಸಲಾಗುತ್ತಿದೆ. ಈಗಾಗ್ಲೇ ಮಠದಲ್ಲಿ ವಿವಿಧ ಸ್ವಾಮೀಜಿಗಳ ನೇತೃತ್ವದಲ್ಲಿ ಗದ್ದುಗೆ ಪೂಜೆ ನಡೆಸಲಾಗುತ್ತಿದೆ.
ಇದಕ್ಕೂ ಮೊದಲ ಮಠದ ಆವರಣದಲ್ಲಿ ರುದ್ರಾಕ್ಷಿ ರಥದಲ್ಲಿ ಶ್ರೀಗಳ ಬೆಳ್ಳಿ ಮೂರ್ತಿ ಮೆರವಣಿಗೆ ನಡೆಸಲಾಯಿತು. ಇಂದು ಮಠಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಸಿಎಂ ಬೊಮ್ಮಾಯಿ ಆದಿಯಾಗಿ ಅನೇಕರು ರಾಜಕೀಯ ಗಣ್ಯರು ಭೇಟಿ ನೀಡಲಿದ್ದಾರೆ.