ಸಿಎಂ, ಗೃಹ ಸಚಿವರ ಕುಮ್ಮಕ್ಕಿನಿಂದಲೇ ಗಲಾಟೆ: ಕರಂದ್ಲಾಜೆ

165

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರ ಕುಮ್ಮಕ್ಕಿನಿಂದಲೇ ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈದ್ ಮಿಲಾದ್ ಒಂದೇ ದಿನ ತಾನೇ ಆಚರಣೆ ಮಾಡುವುದು. ದಿನ ಬಿಟ್ಟು ದಿನ ಈದ್ ಮಿಲಾದ್ ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಬೇರೆ ಬೇರೆ ಜಿಲ್ಲೆಗಳಿಂದ ಜನರನ್ನು ಕರೆಸಿಕೊಂಡು ಗಲಭೆ ಮಾಡುವುದಾಗಿದೆ. ಸಿದ್ದರಾಮಯ್ಯ, ಪರಮೇಶ್ವರ್ ಅವರ ಕುಮ್ಮಕ್ಕಿನಿಂದಲೇ ಪುಂಡರು ಗಲಾಟೆ ಮಾಡಿದ್ದಾರೆ ಅಂತಾ ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!