ಶಿವಮೊಗ್ಗ ಗಲಭೆ, ಸಚಿವ ರಾಮಲಿಂಗಾ ರೆಡ್ಡಿ ಯೂಟರ್ನ್

190

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಭೆ ಸಂಬಂಧ ಹೇಳಿಕೆ ನೀಡಿದ್ದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಇದೀಗ ಯೂಟರ್ನ್ ಹೊಡೆದಿದ್ದಾರೆ. ಯಾರೇ ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳಿ. ಸಾಮಾನ್ಯವಾಗಿ ಬಿಜೆಪಿಯವರು ಆ ರೀತಿ ಮಾಡುತ್ತಾರೆ ಎಂದು ಹೇಳಿದ್ದೇನೆ. ಶಿವಮೊಗ್ಗ ಘಟನೆ ಆಧರಿಸಿ ಹೇಳಿಲ್ಲ ಎಂದಿದ್ದಾರೆ.

ಬಿಜೆಪಿಯವರು ಯಾವಾಗಲೂ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಾರೆ. ಅಧಿಕಾರದಲ್ಲಿದ್ದಾಗ ನೈತಿಕ ಪೊಲೀಸ್ ಗಿರಿ ಮಾಡಿಸುತ್ತಾರೆ. ಬಿಜೆಪಿಯವರೆ ವೇಷ ಬದಲಿಸಿಕೊಂಡು ಗಲಭೆ ಮಾಡುತ್ತಾರೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದರು. ಅವರ ಹೇಳಿಕೆ ಬೇರೆ ಸ್ವರೂಪ ಪಡೆಯುತ್ತಿದ್ದಂತೆ ಅದಕ್ಕೆ ಸ್ಪಷ್ಟನೆ ಕೊಡುವ ಮೂಲಕ ಯೂಟರ್ನ್ ಹೊಡೆದಿದ್ದಾರೆ.




Leave a Reply

Your email address will not be published. Required fields are marked *

error: Content is protected !!