ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ದಿನಗಳು ಕಳೆದಂತೆ ಶಿವಮೊಗ್ಗ ಕೋಮು ಸಂಘರ್ಷದ ಜಿಲ್ಲೆಯಾಗಿ ಬದಲಾಗುತ್ತಿದ್ಯಾ ಅನ್ನೋ ಪ್ರಶ್ನೆ ಮೂಡಿಸುತ್ತಿದೆ. ಕಾರಣ ಪದೆಪದೆ ಕೋಮು ಗಲಾಭೆಗಳು ನಡೆಯುತ್ತಿರುವುದು. ಇಡೀ ದೇಶ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದಲ್ಲಿದೆ. ಆದರೆ, ಶಿವಮೊಗ್ಗದಲ್ಲಿ ಗಲಾಟೆ ನಡೆದಿದೆ.
ಸಾವರ್ಕರ್ ಅವರ ಫ್ಲೆಕ್ಸ್ ವಿಚಾರವಾಗಿ ಎರಡು ಕೋಮಿನ ನಡುವೆ ಗಲಾಟೆ ನಡೆದಿದೆ. ಹೀಗಾಗಿ ಕೇವಲ 2 ಗಂಟೆಯ ಅಂತರದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ದುಷ್ಕರ್ಮಿಗಳು 27 ವರ್ಷದ ಪ್ರವೀಣ್ ಹಾಗೂ ಪ್ರೇಮ್ ಸಿಂಗ್ ಎಂಬುವರಿಗೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಹೀಗಾಗಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಅಶೋಕ ನಗರದಲ್ಲಿ ಅಂಗಡಿ ಇಟ್ಟುಕೊಂಡಿದ್ದ ಪ್ರವೀಣ್, ಅದನ್ನು ಮುಚ್ಚಿ ಮನೆಗೆ ಹೋಗುತ್ತಿದ್ದಾಗ ಚಾಕುವಿನಿಂದ ಇರಿಯಲಾಗಿದೆ. ಅದೇ ರೀತಿ ಉಪ್ಪಾರಕೇರಿಯಲ್ಲಿ ಪ್ರೇಮ್ ಸಿಂಗ್ ಎಂಬುವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಇಬ್ಬರನ್ನು ಪ್ರತ್ಯೇಕ ಆಸ್ಪತ್ರೆಗೆ ದಾಖಲಿಸಲಾಗಿದೆ.