ಪ್ರಜಾಸ್ತ್ರ ಸುದ್ದಿ
ಶಿವಮೊಗ್ಗ: ಲೋಕಸಭೆ ಚುನಾವಣೆ ಪ್ರಚಾರವನ್ನು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ಬುಧವಾರ ಪ್ರಾರಂಭಿಸಿದ್ದಾರೆ. ಟಿಕೆಟ್ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಬಂದ ಅವರನ್ನು ಭರ್ಜರಿಯಾಗಿ ಸ್ವಾಗತಿಸಲಾಗಿದೆ.
ಭದ್ರಾವತಿ ಹತ್ತಿರದ ಬಾರಂದೂರು ಗ್ರಾಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಸ್ವಾಗಿತಿಸಿದರು. ಅಲ್ಲಿಂದ ಶಿವಮೊಗ್ಗದ ತನಕ ಮೆರವಣಿಗೆ ನಡೆಸಲಾಯಿತು. ಈ ವೇಳೆ ಪತಿ ನಟ ಶಿವರಾಜಕುಮಾರ್, ಸಹೋದರ, ಸಚಿವ ಮಧು ಬಂಗಾರಪ್ಪ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿ ಇತರರು ಭಾಗವಹಿಸಿದ್ದರು.