ಶಿವಮೊಗ್ಗದಲ್ಲಿ ಪೊಲೀಸ್ ಎನ್ ಕೌಂಟರ್ ಸುಳ್ಳು

164

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಪೊಲೀಸ್ ಎನ್ ಕೌಂಟರ್ ನಲ್ಲಿ ಮುಸ್ಲಿಂ ಯುವಕ ಬಲಿಯಾಗಿದ್ದಾನೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದು ಹರಿದಾಡಿದೆ. ಮಂಗಳವಾರ ಎಸ್ಪಿ ಇದಕ್ಕೆ ಸ್ಪಷ್ಟನೆ ನೀಡಿದ್ದು, ಇದೊಂದು ಸುಳ್ಳು ಸುದ್ದಿ. ಯಾರೂ ಗಾಬರಿಯಾಗಬೇಡಿ ಎಂದಿದ್ದಾರೆ.

ಈ ರೀತಿಯ ಸುಳ್ಳು ಸುದ್ದಿ ಹರಿಬಿಟ್ಟ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.

ಇನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಲ್ಲಿನ ನಿವಾಸಿಗಳ ಜೊತೆಗೆ ಮಾತುಕತೆ ನಡೆಸಿದರು. ಈ ಸಂಬಂಧ 14 ಎಫ್ಐಆರ್ ದಾಖಲಾಗಿವೆ. 60 ಜನರನ್ನು ಬಂಧಿಸಲಾಗಿದೆ. ಶಾಂತಿ ಕದಡುವ, ಸಾರ್ವಜನಿಕರ ಆಸ್ತಿ ಹಾನಿ ಮಾಡುವ, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇವೆ. ಗಣೇಶ ವಿಸರ್ಜನೆ ಶಾಂತಿಯುತವಾಗಿ ನಡೆದಿದೆ. ಈದ್ ಮಿಲಾದ್ ಹಬ್ಬದಲ್ಲಿ ಅಹಿತಕರ ಘಟನೆ ನಡೆದಿರುವುದು ವಿಷಾದಕರ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!