ಸಿಎಂ-ಶಿವಣ್ಣ ಭೇಟಿ ಮುಂದೂಡಿಕೆ

297

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕರೋನಾ ಹಾವಳಿಯಿಂದಾಗಿ ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನ ಎದುರಿಸ್ತಿದೆ. ಹೀಗಾಗಿ ಕಳೆದವಾರ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಅವರ ಮನೆಯಲ್ಲಿ ಸಭೆ ನಡೆಸಲಾಗಿತ್ತು. ನಿರ್ಮಾಪಕರು, ನಿರ್ದೇಶಕರು, ನಟರು ಭಾಗಿಯಾಗಿ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿದ್ರು.

ಈ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪನವರನ್ನ ಶಿವಣ್ಣ ಭೇಟಿಯಾಗಲು ಮಂಗಳವಾರ ನಿಗದಿಯಾಗಿತ್ತು. ಆದ್ರೆ, ಸಿಎಂಗೆ ಕರೋನಾ ಸೋಂಕು ದೃಢಪಟ್ಟಿರುವುದ್ರಿಂದ ಸಧ್ಯಕ್ಕೆ ಭೇಟಿಯನ್ನ ಮುಂದೂಡಲಾಗಿದೆ. ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡ್ಮೇಲೆ ಮತ್ತೊಮ್ಮೆ ಸಮಯ ನಿಗದಿ ಮಾಡಿಕೊಂಡು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!