ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕರೋನಾ ಹಾವಳಿಯಿಂದಾಗಿ ಕನ್ನಡ ಚಿತ್ರರಂಗ ಸಾಕಷ್ಟು ಸಮಸ್ಯೆಗಳನ್ನ ಎದುರಿಸ್ತಿದೆ. ಹೀಗಾಗಿ ಕಳೆದವಾರ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ ಅವರ ಮನೆಯಲ್ಲಿ ಸಭೆ ನಡೆಸಲಾಗಿತ್ತು. ನಿರ್ಮಾಪಕರು, ನಿರ್ದೇಶಕರು, ನಟರು ಭಾಗಿಯಾಗಿ ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚಿಸಿದ್ರು.
ಈ ಸಂಬಂಧ ಸಿಎಂ ಬಿ.ಎಸ್ ಯಡಿಯೂರಪ್ಪನವರನ್ನ ಶಿವಣ್ಣ ಭೇಟಿಯಾಗಲು ಮಂಗಳವಾರ ನಿಗದಿಯಾಗಿತ್ತು. ಆದ್ರೆ, ಸಿಎಂಗೆ ಕರೋನಾ ಸೋಂಕು ದೃಢಪಟ್ಟಿರುವುದ್ರಿಂದ ಸಧ್ಯಕ್ಕೆ ಭೇಟಿಯನ್ನ ಮುಂದೂಡಲಾಗಿದೆ. ಸಿಎಂ ಸಂಪೂರ್ಣವಾಗಿ ಚೇತರಿಸಿಕೊಂಡ್ಮೇಲೆ ಮತ್ತೊಮ್ಮೆ ಸಮಯ ನಿಗದಿ ಮಾಡಿಕೊಂಡು ಭೇಟಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.