ಸಿಲಿಕಾನ್ ಸಿಟಿಯಲ್ಲಿ ಅಗ್ನಿ ಅನಾಹುತ: ಹಲವೆಡೆ ವಿದ್ಯುತ್ ಕಟ್

333

ಬೆಂಗಳೂರು: ನಗರದ ಪ್ರಮುಖ ರಸ್ತೆಯಾಗಿರುವ ಆನಂದರಾವ್ ಸರ್ಕಲ್ ಬಳಿ ವಿದ್ಯುತ್ ಅನಾಹುತ ಸಂಭವಿಸಿದೆ. ಇಂದು ಮಧ್ಯಾಹ್ನ ಬೆಸ್ಕಾಂಗೆ ಸೇರಿದ ಟ್ರಾನ್ಸ್ ಪಾರ್ಮರ್ ಗೆ ಬೆಂಕಿ ಕಾಣಿಸಿಕೊಂಡು ಭಯದ ವಾತಾವರಣ ನಿರ್ಮಿಸಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಾಗಿಲ್ಲ.

ಶಾಟ್ ಸರ್ಕ್ಯೂಟ್ ನಿಂದಾಗಿ 20 ಕೆಬಿ ಸಾಮರ್ಥ್ಯದ ಟ್ರಾನ್ಸ್ ಪಾರ್ಮರ್ ಗೆ ಬೆಂಕಿ ಹೊತ್ತಿಕೊಂಡಿದ್ದು, ನಿಕರ ಕಾರಣ ತಿಳಿದು ಬಂದಿಲ್ಲ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಕಿ ಅನಾಹುತದಿಂದಾಗಿ ರಾಜಭವನ, ವಿಧಾನಸೌಧ, ಮೆಜೆಸ್ಟಿಕ್, ಅವೆನ್ಯೂ ರಸ್ತೆ, ಮೆಲ್ಲೇಶ್ವರಂ, ಶೇಷಾದ್ರಿಪುರಂ, ಕಾಟನ್ ಪೇಟೆ, ಚಿಕ್ಕಪೇಟೆ, ವಸಂತ ನಗರ, ಗಾಂಧಿ ನಗರದ ತುಂಬಾ ವಿದ್ಯುತ್ ಸಂಪರ್ಕ ಕಟ್ ಆಗಿದೆ.




Leave a Reply

Your email address will not be published. Required fields are marked *

error: Content is protected !!