ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸದಾ ವಿವಾದಾತ್ಮಕ ಹೇಳಿಕೆಗಳನ್ನು ಕೊಡುವಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಎತ್ತಿದ ಕೈ. ಹಿಂದೂಗಳನ್ನು ಅವಮಾನಿಸುವವರನ್ನು ಗುಂಡಿಕ್ಕಿ ಎಂದು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾಳಿ ಚಿತ್ರದ ವಿವಾದಾತ್ಮಕ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ನಿರ್ದೇಶಕಿ ಲೀನಾ ಮಣಿಮೇಕಲೈ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಕಾಳಿಮಾತೆ ಭಾರತೀಯ ಸಂಸ್ಕೃತಿಯ ಪ್ರತಿನಿಧಿ. ನುಪೂರ್ ಪ್ರವಾದಿ ಮಹಮ್ಮದ್ ಅವರ ವಿರುದ್ಧ ಹೇಳಿಕೆ ನೀಡಿದಾಗ ಪ್ರಪಂಚದಾದ್ಯಂತ ಇರುವ ಮುಸ್ಲಿಂರು ಪ್ರತಿಭಟಿಸಿದರು. ಹಾಗೇ ಹಿಂದೂ ದೇವರುಗಳ ಅವಮಾನ ಆದಾಗ ಎಲ್ಲರೂ ಧ್ವನಿ ಎತ್ತಬೇಕು ಎಂದಿದ್ದಾರೆ.
ಹೀಗೆ ಬಹಿರಂಗವಾಗಿ ಗುಂಡಿಕ್ಕಿ ಕೊಲ್ಲಬೇಕು ಅನ್ನೋದು ಎಷ್ಟು ಸರಿ ಅನ್ನೋ ಪ್ರಶ್ನೆ ಮೂಡಿದೆ. ನಾಯಕರ ಮಾತು ಕೇಳಿ ಅವರ ಬೆಂಬಲಿಗರು ಕೊಲೆಗೆ ಮುಂದಾದರೆ ಯಾರು ಹೊಣೆ ಎಂದು ಕೇಳುತ್ತಿದ್ದಾರೆ.