ಪ್ರಜಾಸ್ತ್ರ ಸುದ್ದಿ
ಥಾಣೆ: ಭೂ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣದ ಶಿವಸೇನೆ ಮುಖಂಡನ ಮೇಲೆ ಬಿಜೆಪಿ ಶಾಸಕ ಗುಂಡು ಹಾರಿಸಿದ್ದಾರೆ. ಈ ಸಂಬಂಧ ಶಾಸಕನ ಬಂಧನವಾಗಿದೆ.
ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಶಾಸಕ ಗಣಪತ್ ಗಾಯಕ್ವಾಡನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉಲ್ಲಾಸನಗರದ ಹಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ಶಿವಸೇನೆ ಮುಖಂಡ ಮಹೇಶ್ ಗಾಯಕ್ವಾಡ್ ಮೇಲೆ ಶಾಸಕ ಗುಂಡಿನ ದಾಳಿ ನಡೆಸಿದ್ದಾರೆ. ಮಹೇಶನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಥಾಣೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಮಹೇಶ್ ಗಾಯಕ್ವಾಡ್ ಕಡೆಯ ಕೆಲವರು ಗಾಯಗೊಂಡಿದ್ದಾರೆ. ಶಾಸಕನ ಜೊತೆಗೆ ಇನ್ನಿಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.