ಪ್ರಜಾಸ್ತ್ರ ಸುದ್ದಿ
ಬಾದಾಮಿ: ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ಶುಕ್ರವಾರ ನಸುಕಿನ ಜಾವದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಇದ್ರಿಂದಾಗಿ ಹೋಟೆಲ್, ಫರ್ನೀಚರ್ ಹಾಗೂ ಗ್ಯಾರೇಜ್ ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಹೀಗಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ನಸುಕಿನ ಜಾವ ಸುಮಾರು 3 ಗಂಟೆ ಹೊತ್ತಿನಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗ್ತಿದೆ. ಹೂವಪ್ಪ ಕಲಾಲ ಎಂಬುವರ ಹೋಟೆಲ್, ಭೀಮಸಿ ಬಡಿಗೇರ ಎಂಬುವರ ಫರ್ನೀಚರ್ ಅಂಗಡಿ ಹಾಗೂ ಅಲ್ಲಾಭಕ್ಷ ಹೆಬ್ಬಳ್ಳಿ ಎಂಬುವರ ಗ್ಯಾರೇಜ್ ಸುಟ್ಟು ಭಸ್ಮವಾಗಿವೆ.
ಘಟನೆ ಬಗ್ಗೆ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಈ ಅವಗಡದಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ ಅಂಗಡಿಕಾರರು ಮುಂದೇನು ಅನ್ನೋ ಚಿಂತೆಯಲ್ಲಿದ್ದಾರೆ.