ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ಅಭ್ಯರ್ಥಿಗಳ ಆಯ್ಕೆ ಕುರಿತು ಕ್ಷೇತ್ರ, ತಾಲೂಕು, ಜಿಲ್ಲಾ ಮಟ್ಟದಲ್ಲಿ ಅಭಿಪ್ರಾಯ ಸಂಗ್ರಹವಾಗಿದೆ. ಪ್ರತಿ ಕ್ಷೇತ್ರದಲ್ಲಿ 2-3 ಹೆಸರುಗಳನ್ನು ಶಾರ್ಟ್ ಲಿಸ್ಟ್ ಮಾಡಲಾಗಿದೆ. ನಾಳೆ ದೆಹಲಿಯಲ್ಲಿ ಸಂಸದೀಯ ಮಂಡಳಿಯ ಸಭೆ ನಡೆಯಲಿದ್ದು, ಅಲ್ಲಿಗೆ ಹೋಗುತ್ತಿದ್ದೇನೆ. ಅಲ್ಲಿ ಅಂತಿಮ ತೀರ್ಮಾನವಾಗಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸದೀಯ ಮಂಡಳಿ ತೆಗೆದುಕೊಳ್ಳುವ ನಿರ್ಧಾರ ಅಂತಿಮವಾಗಿರುತ್ತೆ. ಆಕಾಂಕ್ಷಿಗಳ ನಡುವೆ ಆಣೆ, ಪ್ರಮಾಣ ಆಯಾ ಕ್ಷೇತ್ರದಲ್ಲಿ ನಡೆಯುತ್ತೆ. ಅದರ ಬಗ್ಗೆ ಮಾತನಾಡುವುದಿಲ್ಲ. ಇನ್ನು ನಾಗರಾಜ ಛಬ್ಬಿ ಇದುವರೆಗೂ ನನ್ನನ್ನು ಸಂಪರ್ಕಿಸಿಲ್ಲ ಎಂದರು.
ನಟ ಸುದೀಪ್ ಬೆಂಬಲ ನೀಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿನಿಮಾ ನಟರ ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುತ್ತಿರುವುದು ಹೊಸದೇನೂ ಅಲ್ಲ. ಇಡೀ ದೇಶದಲ್ಲಿದೆ. ಅದೆ ರೀತಿ ಕರ್ನಾಟಕದಲ್ಲಿದೆ. ರಾಮನಗರ ಚುನಾವಣೆಯಲ್ಲಿ ಕುಮಾರಸ್ವಾಮಿ ಅಂಬರೀಶ್ ಕರೆದುಕೊಂಡು ಬಂದು ಪ್ರಚಾರ ಮಾಡಿದ್ದು ಮರೆತಿದ್ದಾರಾ? ಅವರಿಗೆ ಸೋಲಿನ ಭಯ. ನಮಗೆ ಗೆಲ್ಲುವ ವಿಶ್ವಾಸವಿದೆ ಎಂದರು.