ಬಿಜೆಪಿ ಕಾರ್ಯಕರ್ತರಿಂದ ಗಾಳಿಯಲ್ಲಿ ಗುಂಡು: ಪಿಎಸ್ಐ ಸೇರಿ ನಾಲ್ವರ ಅಮಾನತು

279

ಪ್ರಜಾಸ್ತ್ರ ಸುದ್ದಿ

ಯಾದಗಿರಿ: ಜನಾಶೀರ್ವಾದ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನ ಸ್ವಾಗತಿಸುವ ಸಂದರ್ಭದಲ್ಲಿ ಬುಧುವಾರ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ರು. ಇದು ಸಾಕಷ್ಟು ಆಕ್ರೋಶಕ್ಕೆ ಕಾರಣವಾಯ್ತು. ಈ ಸಂಬಂಧ ಪಿಎಸ್ಐ ಸೇರಿ ನಾಲ್ವರನ್ನ ಅಮಾನತು ಮಾಡಲಾಗಿದೆ.

ಗ್ರಾಮಾಂತರ ಠಾಣೆ ಪಿಎಸ್ಐ ಸುರೇಶ ಹಾಗೂ ಮೂವರು ಕಾನ್ಸ್ ಟೇಬಲ್ ಗಳನ್ನ ಅಮಾನತು ಮಾಡಿ, ಎಸ್ಪಿ ಸಿ.ಬಿ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!