ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಆರ್ ಎಸ್ಎಸ್ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿರುವ ಬಗ್ಗೆ, ಸಚಿವ ಪ್ರಭು ಚೌಹಾಣ್ ತಿರುಗೇಟು ಕೊಟ್ಟಿದ್ದಾರೆ. ಆರ್ ಎಸ್ಎಸ್ ಇಲ್ಲವೆಂದಿದ್ದರೆ ಭಾರತ ಪಾಕಿಸ್ತಾನ ಆಗುತಿತ್ತು ಎಂದು ಹೇಳಿದ್ದಾರೆ.
ಆರ್ ಎಸ್ಎಸ್ ದೇಶ ಭಕ್ತಿಯ ಸಂಸ್ಥೆ. ಅದು ದೇಶದ ಪರ ಕೆಲಸ ಮಾಡುತ್ತದೆ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹೇಳಿಕೆ ಖಂಡಿಸುತ್ತೇನೆ. ತಾಲಿಬಾನ್, ಪಾಕಿಸ್ತಾನ ಎಲ್ಲವೂ ಕಾಂಗ್ರೆಸ್ ನವರೇ ಎಂದು ವಾಗ್ದಾಳಿ ನಡೆಸಿದ್ದಾರೆ.