ಸಿದ್ದು-ಡಿಕೆಶಿ ಪ್ರತ್ಯೇಕ ಯಾತ್ರೆಗೆ ಹೈಕಮಾಂಡ್ ಬ್ರೇಕ್

136

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಸಕಲ ಸಿದ್ಧತೆ ನಡೆಸಿದೆ. ಸೋಮವಾರ ಸಂಜೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಪ್ರತ್ಯೇಕ ಬಸ್ ಯಾತ್ರೆ ಬೇಡ ಎಂದಿದೆ.

ಮಾಜಿ ಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರ ನಡುವೆ ಒಂದಿಷ್ಟು ಬಿರುಕು ಇರುವುದು ಬಹಿರಂಗಗೊಳ್ಳುತ್ತಲೇ ಇದೆ. ಈ ಇಬ್ಬರು ಪ್ರತ್ಯೇಕವಾಗಿ ಯಾತ್ರೆ ನಡೆಸಿದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಕಾರ್ಯಕರ್ತರಲ್ಲಿ ಮತ್ತಷ್ಟು ಗೊಂದಲ ಮೂಡುತ್ತದೆ. ಅದಕ್ಕೆ ಅವಕಾಶ ಕೊಡಬೇಡಿ ಎಂದು ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!