ಪ್ರಜಾಸ್ತ್ರ ಸುದ್ದಿ
ವಿಜಯನಗರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಧೈರ್ಯವಿದ್ದರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ. ಕಾಂಗ್ರೆಸ್ ಧಮ್ ಬಗ್ಗೆ ಕೇಳುತ್ತಾರೆ, ಅವರಿಗೆ ಧಮ್ ಇದ್ದರೆ ಕೇಂದ್ರದಿಂದ ಅನುದಾನ ತರಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ನಾನು ಸಿಎಂ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೇನೆ. ಬಿಜೆಪಿಯವರು ಒಂದು ಭರವಸೆಯನ್ನಾದರೂ ಈಡೇರಿಸಿದ್ದಾರಾ, ಮೋದಿ ಮುಂದೆ ನಾಯಿಯಂತೆ ಇರ್ತಾರೆ. ಧಮ್, ತಾಕತ್ ಇದ್ರೆ ಅನುದಾನ ತರಲಿ ಎಂದು ಕಿಡಿ ಕಾರಿದರು.