ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಂಘ ಪರಿವಾರದವರು ಕೊಲೆ ಆರೋಪಿಗಳು ಎಂದು ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಸಚಿವ ಸಿ.ಟಿ ರವಿ ನಡುವೆ ಟ್ವೀಟ್ ವಾರ್ ನಡೆದಿದೆ. ಸಿದ್ದು ಮಾತಿಗೆ ಸಚಿವ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.
ಸಂಘ ಜಾತಿವಾದಿಯಲ್ಲ. ದೇಶದ್ರೋಹಿ ಅಲ್ಲ. ನೀವೇ ಐದು ವರ್ಷ ಅಧಿಕಾರದಲ್ಲಿದ್ದೀರಿ. ಆಗ ಸಂಘ ಪರಿವಾರ ಯಾವುದಾದ್ರೂ ಹತ್ಯೆಯಲ್ಲಿ ಭಾಗಿಯಾಗಿದ್ದರೆ ನಿಷೇಧ ಮಾಡಲು ಶಿಫಾರಸು ಮಾಡಬಹುದಿತ್ತು ಆಗ ನಿಮಗೆ ಬ್ಯಾಟರಿ ಇರಲಿಲ್ವಾ ಎಂದು ಕಟುವಾಗಿ ಟೀಕಿಸಿದ್ದಾರೆ.
ಗಾಂಧೀಜಿ ಹತ್ಯೆಯನ್ನ ಕಾಂಗ್ರೆಸ್ ನವರು ಸಂಘದ ಮೇಲೆ ಹಾಕಿದ್ರು. ಅಂದಿನ ಸರ್ಕಾರ ನೇಮಿಸಿದ ಕಪೂರ್ ಕಮಿಷನ್ ಸಹ ಗಾಂಧಿ ಹತ್ಯೆಗೂ ಸಂಘ ಪರಿವಾರಕ್ಕೂ ಸಂಬಂಧವಿಲ್ಲ ಎಂದಿತ್ತು. ನಿಮ್ಮ ರಾಜಕೀಯ ತೆವಲಿಗೆ ದೇಶಭಕ್ತಿ ಸಂಘಟನೆ ಮೇಲೆ ಸುಳ್ಳು ಆರೋಪ ಮಾಡಬೇಡಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಕಿಡಿ ಕಾರಿದ್ದಾರೆ.