ಪ್ರಜಾಸ್ತ್ರ ಸುದ್ದಿ
ಬಾಗಲಕೋಟೆ: ಅರ್ಕಾವತಿ ಹಗರಣ ಸಂಬಂಧ ಸಿದ್ದರಾಮಯ್ಯ ಇಂದಲ್ಲ ನಾಳೆ ಜೈಲಿಗೆ ಹೋಗುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶ ಅರ್ಥ ಮಾಡಿಕೊಳ್ಳದಷ್ಟು ಸಿದ್ದರಾಮಯ್ಯ ದಡ್ಡರಾಗಿದ್ದಾರಾ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ ಜಾತಿವಾದಿ ಪಕ್ಷ. ಬಿಜೆಪಿ ಕ್ರಾಂತಿಕಾರಿ ಬದಲಾವಣೆ ತರುತ್ತಿದೆ. ಭಾರತೀಯ ಸಂಸ್ಕೃತಿಯನ್ನು ನಾವು ತರುತ್ತೇವೆ. ರಾಹುಲ್ ಗಾಂಧಿ ಕಾಲಿಟ್ಟಲೆಲ್ಲ ಕಾಂಗ್ರೆಸ್ ಸೋಲುತ್ತಿದೆ. ಈ ಬಾರಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ರಾಷ್ಟ್ರೀಯವಾದಿ ಪಕ್ಷಕ್ಕೆ ಜನ ಬೆಂಬಲಿಸಲಿದ್ದಾರೆ ಎಂದರು.