ಮಾಜಿ ಸಿಎಂಗಳ ಗಿಣಿ ಹದ್ದಿನ ಜಗಳ

352

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಿಬ್ಬರ ನಡುವೆ ಇದೀಗ ಗಿಣಿ ಹದ್ದಿನ ಜಗಳ ನಡೆದಿದೆ. ಸಿದ್ದರಾಮಯ್ಯ ಸಾಕಿದ ಗಿಣಿಗಳು ಅವರಿಗೆ ಹದ್ದಾಗಿ ಕುಕ್ಕಿವೆ ಅಂತಾ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಟ್ವೀಟರ್ ನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹೌದು ಹೆಚ್.ಡಿ ಕುಮಾರಸ್ವಾಮಿ ಅವರೇ, ನಾನೇ ನಂಬಿದ ಗಿಣಿಗಳು ಹದ್ದಾಗಿ ಕಾಡಿದ್ದು ನಿಜ. ನನ್ನದೆ ತಪ್ಪು. ಹದ್ದನ್ನು ಗಿಣಿಯೆಂದು ಸಂಭ್ರಮಿಸಿ ಮೈತ್ರಿ ಮಾಡಿಕೊಂಡೆವು ಎಂದು ತಿರುಗೇಟು ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!