ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ವಿ.ಶ್ರೀರಾಮುಲು ಅವರ ನಡುವೆ ಟ್ವೀಟ್ ವಾರ್ ನಡೆದಿದೆ. ಟ್ವೀಟ್ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ವಿರುದ್ಧ ಶ್ರೀರಾಮುಲು ಟ್ವೀಟ್ ನಲ್ಲಿ ಉತ್ತರ ಕೊಟ್ಟಿದ್ದಾರೆ.
ಮೋದಿ ಹಾಗೂ ಬಿಎಸ್ವೈ ಸರ್ಕಾರದ ವಿರುದ್ಧ ಆರೋಪ ಮಾಡುವ ಮೊದ್ಲು, ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಆರೋಪ ಮಾಡಿ ಆರೋಪಿಗಳಾಗಿರುವ ನಿಮ್ಮ ಪಕ್ಷದ ರಾಜ-ಮಹಾರಾಜರ ಬಗ್ಗೆ ಗಮನಹರಿಸುವುದು ಒಳ್ಳೆಯದು ಅಲ್ಲವೇ ಎಂದು ಟ್ವೀಟ್ ಮಾಡಿದ್ದಾರೆ.
ಹೀಗೆ ಸಿದ್ದರಾಮಯ್ಯ ಹಾಗೂ ಶ್ರೀರಾಮುಲು ಅವರ ನಡುವೆ ಟ್ವೀಟ್ ಸಮರ ನಡೆದಿದೆ. ಕರೋನಾ ಟೈಂನಲ್ಲಿ ಸರ್ಕಾರದ ನಡೆ ಕುರಿತು ಟೀಕಿಸಿದ ಸಿದ್ದು ವಿರುದ್ಧ ಆರೋಗ್ಯ ಸಚಿವರ ಪ್ರತಿಟ್ವೀಟ್ ಇದಾಗಿದೆ.